ಸಿದ್ದಾಪುರ: ಭುವನಗಿರಿಯ ಭುವನೇಶ್ವರಿ ಸನ್ನಿಧಾನದಲ್ಲಿ ಸೆ.9 ಶನಿವಾರ ಸಂಜೆ 6 ಗಂಟೆಯಿಂದ ಸೆ.10 ರವಿವಾರ ಸಂಜೆ 6 ಗಂಟೆಯವರೆಗೆ ನಿರಂತರವಾಗಿ ಭಜನಾ ಕಾರ್ಯಕ್ರಮ

ಸಿದ್ದಾಪುರ; ತಾಲೂಕಿನ ಭುವನಗಿರಿಯ ಭುವನೇಶ್ವರಿ ಸನ್ನಿಧಾನದಲ್ಲಿ ಸೆ.9 ಶನಿವಾರ ಸಂಜೆ 6 ಗಂಟೆಯಿಂದ ಸೆ.10 ರವಿವಾರ ಸಂಜೆ 6 ಗಂಟೆಯವರೆಗೆ ನಿರಂತರವಾಗಿ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸುಷಿರ ಸಂಗೀತ ಪರಿವಾರದ ನಾರಾಯಣ ಹೆಗಡೆ ಕಲ್ಲಾರೆಮನೆ ಹೇಳಿದರು.
ಅವರು ಪಟ್ಟಣದ ಶಂಕರಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಲಿದ್ದಾರೆ.
ಸುಷಿರ ಸಂಗೀತ ಪರಿವಾರ ಕಾರ್ಯಕ್ರಮವನ್ನು ಆಯೋಜಿಸಿದ್ದು ಶಿರಸಿಯ ರಾಜದೀಪ ಟ್ರಸ್ಟ್ ಹಾಗೂ ಸಾಗರದ ಸದ್ಗುರು ಶಾಸ್ತ್ರೀಯ ಸಂಗೀತ ವಿದ್ಯಾಲಯ ಹಾಗೂ ಭುವನೇಶ್ವರೀ ದೇವಾಲಯದ ಆಡಳಿತ ಮಂಡಳಿಯ ಸಹಯೋಗ ಇರಲಿದೆ. ಶನಿವಾರ ಸಂಜೆ ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು ಭುವನೇಶ್ವರಿ ದೇವಾಲಯದ ಉಪಾಧ್ಯಕ್ಷ ಚಂದ್ರಕಾಂತ ಹೆಗಡೆ ಅಧ್ಯಕ್ಷತೆವಹಿಸಲಿದ್ದಾರೆ.ರಾಜದೀಪ ಟ್ರಸ್ಟ್ನ ದೀಪಕ್ ದೊಡ್ಡುರು,ಕೋಟೆ ಹನುಮಂತ ದೇವಾಲಯದ ಅಧ್ಯಕ್ಷ ವಿ.ಎನ್.ನಾಯ್ಕ,ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಶಾಸ್ತ್ರೀ ಬಿಳಗಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರವಿವಾರ ಸಮಾರೋಪ ಸಮಾರಂಭ ನಡೆಯಲಿದೆ.