ಹೊನ್ನಾವರ ಪ.ಪಂಚಾಯತ್ ಕಾರ್ಯಚಟುವಟಿಕೆ ಪರಿಶೀಲಿಸಿದ ಶಾಸಕ ದಿನಕರ ಶೆಟ್ಟಿ

ಕುಮಟಾ ; ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾನ್ಯ ದಿನಕರ ಶೆಟ್ಟಿಯವರು ಹೊನ್ನಾವರ ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು. ಸಿಬ್ಬಂದಿಗಳಿಂದ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದರು.

ಪಟ್ಟಣ ಪಂಚಾಯತ್ ಕಾರ್ಯಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರನ್ನು ಮಾತನಾಡಿಸಿ, ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ನಂತರ ಪಟ್ಟಣ ಪಂಚಾಯತ್ ಸದಸ್ಯರೊಡನೆ ಸಭೆ ನಡೆಸಿದ ಶಾಸಕರು, ವಿವಿಧ ವಾರ್ಡ್ ಗಳಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಕೊರತೆ ಇರುವ ಸಿಬ್ಬಂದಿಗಳ ಸ್ಥಾನವನ್ನು ತುಂಬುವ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದ್ದು, ತುರ್ತಾಗಿ ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಕೆಟ್ಟಿರುವ ರಸ್ತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

ಹೊನ್ನಾವರ ಮಂಡಲದ ಬಿಜೆಪಿ ಅಧ್ಯಕ್ಷ ರಾಜು ಭಂಡಾರಿ, ಪ. ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ವಿಶ್ವನಾಥ ಗೊಂಡ, ಪಕ್ಷದ ಪ್ರಮುಖರಾದ ಎಮ್. ಎಸ್. ಹೆಗಡೆ ಕಣ್ಣಿ, ಪ. ಪಂ. ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.