ಹೊನ್ನಾವರ: ಕ್ರೀಡೆಗೆ, ಕ್ರೀಡಾಪಟುಗಳಿಗೆ ಯಾವಾಗಲೂ ಗೌರವ ಸಿಗುತ್ತದೆ.ವಿಶ್ವಾಸ ಮತ್ತು ನಂಬಿಕೆಯಿಂದ ಭಾಗವಹಿಸಬೇಕು-ಸುರೇಶ್ ನಾಯ್ಕ

ಹೊನ್ನಾವರ: “ಕ್ರೀಡೆಗೆ, ಕ್ರೀಡಾಪಟುಗಳಿಗೆ ಯಾವಾಗಲೂ ಗೌರವ ಸಿಗುತ್ತದೆ.ವಿಶ್ವಾಸ ಮತ್ತು ನಂಬಿಕೆಯಿಂದ ಭಾಗವಹಿಸಬೇಕು” ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ್ ನಾಯ್ಕ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಉತ್ತರ ಕನ್ನಡ,ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಉತ್ತರ ಕನ್ನಡ, ತಾಲೂಕ ಆಡಳಿತ,ತಾಲೂಕ ಪಂಚಾಯತ,ತಾಲೂಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕ ಯುವ ಒಕ್ಕೂಟ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರ ಪಟ್ಟಣದ ಎಸ್ ಡಿ ಎಮ್ ಪದವಿ ಕಾಲೇಜು ಕ್ರಿಡಾಂಗಣದಲ್ಲಿ ಶನಿವಾರ ನಡೆದ ತಾಲೂಕಾ ಮಟ್ಟದ ದಸರಾ ಕೂಟ 2023ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಹೊನ್ನಾವರ ಎನ್ನುವುದು ಕಲೆ,ಕ್ರೀಡೆ,ಸಾಂಸ್ಕೃತಿಕ ವಲಯದಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಹಲವು ಸಾಧಕರಿದ್ದಾರೆ.ಅವರಿಂದ ಪ್ರೇರಣೆ ಹೊಂದಿ ಎಂದು ಕ್ರೀಡಾಪಟುಗಳಿಗೆ ಹುರಿದುಂಬಿಸಿದರು. ಸರ್ಕಾರವು ಕ್ರೀಡೆಗೆ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.ಸ್ಥಳೀಯವಾಗಿರುವ ಸಂಸ್ಕೃತಿ,ಕ್ರೀಡೆ ಉಳಿಸಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು. ಸೀಮಿತ ಅನುದಾನದಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜನೆಯಾಗಿದೆ. ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ. ಜಿಲ್ಲಾ,ರಾಜ್ಯ ಮಟ್ಟದಲ್ಲಿ ತಾಲೂಕಿನ ಹೆಸರನ್ನು ಗುರುತಿಸುತ್ತಿರಿ ಎನ್ನುವ ಆಶಯವಿದೆ.ಕ್ರೀಡೆ ನಿಮ್ಮೆಲ್ಲರ ಜೀವನದಲ್ಲಿ ದಾರಿ ಆಗಲಿ.ಕ್ರೀಡೆ ಜೊತೆ ಕಲಿಕೆಯಲ್ಲಿಯು ಸಾಧನೆ ಮಾಡಿ ತಾಲೂಕಿನ ಕಿರ್ತಿ ಹೆಚ್ಚಿಸಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಬೈಟ್: ಸುರೇಶ್ ನಾಯ್ಕ

ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ,ದೈಹಿಕ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಾಬು ನಾಯ್ಕ,ಯುವಜನಸೇವಾ ಕ್ರೀಡಾಧಿಕಾರಿ ಸುದೀಶ್ ನಾಯ್ಕ ಉಪಸ್ಥಿತರಿದ್ದರು.