ನಾಳೆಯಿಂದ ಆರೆಂಜ್ ಅಲರ್ಟ್.! ಜಿಲ್ಲೆಯಲ್ಲಿ 5 ದಿನ ಮಳೆ ಸಾಧ್ಯತೆ

ಕಾರವಾರ: ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 2 ರಿಂದ ಒಟ್ಟು 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಎಚ್ಚರಿಕೆ ನೀಡಿದೆ.

ಆ.2 ರಿಂದ ಆ.6 ವರೆಗೆ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರದ ಬಳಿ ತೆರಳುವಾಗ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ-ಗಾಳಿಯ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಿದೆ.

ಇನ್ನು ಪ್ರಕೃತಿ ವಿಕೋಪಕ್ಕೆ ಸಂಬಂದಿಸಿದಂತೆ ಯಾವುದೇ ಸಮಸ್ಯೆಗಳುಂಟಾದರೆ ತಕ್ಷಣದಲ್ಲಿ ತುರ್ತು ಸೇವೆ ಟೋಲ್‌ಫ್ರೀ ಸಂಖ್ಯೆ 1077, 08382-229857 ಅಥವಾ ವಾಟ್ಸಾಪ್ ಸಂಖ್ಯೆ: 9483511015 ಗೆ ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದಾರೆ.