ಸಿದ್ದಾಪುರ : ದೊಡ್ಮನೆ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ನೂತನ ಗೊದಾಮು ಉದ್ಘಾಟನೆ

ಸಿದ್ದಾಪುರ : ದೊಡ್ಮನೆ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘದ ನೂತನ ಗೊದಾಮು ಉದ್ಘಾಟನೆ ಕಾರ್ಯಕ್ರಮ ವಂದಾನೆಯಲ್ಲಿ ನಡೆಯಿತು. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟನೆಗೊಳಿಸಿ ಎಲ್ಲಾ ಸಮುದಾಯದ ಎಲ್ಲ ಜನಕ್ಕೂ ಸೇವಾ ಸಹಕಾರಿ ಸಂಘವು ಸಹಕಾರಿಯಾಗಿದೆ ಪ್ರತಿಯೊಬ್ಬರ ಮನೆಗೂ ಕೂಡ ಸಂಘದಿಂದ ಅನುಕೂಲವಾಗಿದೆ. ಇದೇ ರೀತಿ ಕಾರ್ಯ ಮುಂದುವರೆಸಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ಸರಕಾರ, ನಾವು, ಶಾಸಕರು ಬದ್ಧರಿದ್ದೇವೆ ಎಂದರು. ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟಿ ಎಸ್ ಎಸ್ ನ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದೊಡ್ಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ರಾಯ್ ಭಟ್ಟ ಉಪಾಧ್ಯಕ್ಷ ಚೌಡು ಗೌಡ ಕ್ಯಾದಗಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ನಾಯ್ಕ್, ದೊಡ್ಮನೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಹೆಗಡೆ, ತಹಶೀಲ್ದಾರ್ ಎಂ.ಆರ್ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು. ವಿವೇಕ್ ಭಟ್ ಗಡಿಹಿತ್ಲು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿ ಎಲ್ಲರ ಗಮನ ಸೆಳೆದರು. ತಾಲೂಕಿಗೆ ಸಚಿವರಾಗಿ ಮೊದಲ ಬಾರಿಗೆ ಆಗಮಿಸಿದ ಮಾಂಕಾಳ್ ವೈದ್ಯ ಅವರನ್ನ ತಾಲೂಕ ಪತ್ರಕರ್ತರು ಹಾಗೂ ವಿವಿಧ ಸಂಘಟನೆಗಳು ಅವರನ್ನು ಅಭಿನಂದಿಸಿದರು.