ದಾಂಡೇಲಿಯ ಸಿವಿಲ್ ನ್ಯಾಯಾಲಯದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಲೋಕ್ ಅದಾಲತ್

ದಾಂಡೇಲಿ : ನಗರದ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ರೋಹಿಣಿ.ಡಿ.ಬಸಾಪುರ್ ಅವರ ನೇತೃತ್ವದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವು ಶನಿವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.

ಶನಿವಾರ ಬೆಳಿಗ್ಗೆಯಿಂದ ಆರಂಭಗೊಂಡ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ಪ್ರಕರಣಗಳನ್ನು ರಾಜಿಸಂಧಾನದ ಮೂಲಕ ಬಗೆಹರಿಸಲಾಯಿತು. ಸಂಧಾನಕಾರರಾಗಿ ಸುಮಿತ್ರಾ.ಕೆ ಅವರು ಸಹಕರಿಸಿದ್ದರು. ನಗರದ ನ್ಯಾಯವಾದಿಗಳು ಹಾಗೂ ಸಿವಿಲ್ ನ್ಯಾಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಲೋಕ್ ಅದಾಲತ್ ಯಶಸ್ವಿಗಾಗಿ ಸಹಕರಿಸಿದರು.

ಲೋಕ್ ಅದಲಾತಿನಲ್ಲಿ ಒಟ್ಟು 272 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿ ಅವುಗಳ ಪೈಕಿ 123 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.