ಸಿದ್ದಾಪುರ :ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರಾವಣ ಕವಿ ಗೋಷ್ಠಿ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ

ಸಿದ್ದಾಪುರ : ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಬಾಲ ಭವನದಲ್ಲಿ ಶ್ರಾವಣ ಕವಿ ಗೋಷ್ಠಿ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ ಗೋಪಾಲ ಭಾಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮಗಳಲ್ಲಿ ಸಾಹಿತಿಗಳಾದ ಸುಬ್ರಾಯ ಮತ್ತಿಹಳ್ಳಿ, ಗಂಗಾಧರ್ ಕೊಳಗಿ, ಶಿವಾನಂದ ಹೊನ್ನೇಗುಂಡಿ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ
ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯಧೀಶರಾಗಿದ್ದ ತಿಮ್ಮಯ್ಯ ಜಿ ರವರು ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗವಣೆಗೊಂಡಿರುವ ಹಿನ್ನಲೆಯಲ್ಲಿ ತಾಲೂಕಿನ ವಿವಿಧ ಸಂಘಟನೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ತಾಲೂಕಿನ ವಿವಿದ ಸಂಘಟನೆಗಳಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ. ಎಸ್. ಗೌಡರ್, ಸ್ಪಂದನ ಸೇವಾ ಸಂಸ್ಥೆ ಅಧ್ಯಕ್ಷ ರಾಘವೇಂದ್ರ ನಾಯ್ಕ್, ಸುಧಾರಾಣಿ ನಾಯ್ಕ್, ಹಿರಿಯ ಸಾಹಿತಿ ಸುಬ್ರಾಯ ಮತ್ತಿಹಳ್ಳಿ, ಸಾಹಿತಿ ಗಂಗಾಧರ್ ಕೊಳಗಿ ಕಸಾಪ ತಾ. ಅಧ್ಯಕ್ಷ ಗೋಪಾಲ್ ಭಾಷಿ, ಶಂಕರ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.