ರೇಷನ್, ಆಧಾರ್ ಕಾರ್ಡ್ ತಿದ್ದುಪಡಿಗೆ ದಿನಗಳ ಸೀಮಿತಗೊಳಿಸದೆ ತಿಂಗಳಿನ ಎಲ್ಲಾ ದಿನಗಳಲ್ಲೂ ತಿದ್ದುಪಡಿ ಮಾಡಿಸಲು ಅವಕಾಶ ನೀಡುವಂತೆ ಒತ್ತಾಯ

ಸಿದ್ದಾಪುರ : ರೇಷನ್, ಆಧಾರ್ ಕಾರ್ಡ್ ತಿದ್ದುಪಡಿಗೆ ದಿನಗಳ ಸೀಮಿತಗೊಳಿಸದೆ ತಿಂಗಳಿನ ಎಲ್ಲಾ ದಿನಗಳಲ್ಲೂ ತಿದ್ದುಪಡಿ ಮಾಡಿಸಲು ಅವಕಾಶ ನೀಡುವಂತೆ ಜನಹಿತ ಸೇವಾ ಪೌಂಡೇಶನ್ ಅಧ್ಯಕ್ಷ ಲೋಕೇಶ್ ಹೆಗಡೆ ಒತ್ತಾಯ ಮಾಡಿದ್ದಾರೆ. ರೇಷನ್ ಹಾಗೂ ಆಧಾರ್ ಕಾರ್ಡ್ ಗಳಲ್ಲಿ ಹೆಸರು ಮತ್ತು ಇನ್ನಿತರ ದಾಖಲೆಗಳನ್ನು ತಿದ್ದುಪಡಿ ಮಾಡಿಸಲು ತಿಂಗಳಿನಲ್ಲಿ ಕೆಲವೇ ದಿನಗಳಲ್ಲಿ ಮಾತ್ರ ಮಾಡಲಾಗುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯ ತೊಂದರೆಗಳು ಉಂಟಾಗುತ್ತಿದೆ. ಸರಕಾರದ ಸೌಲಭ್ಯ, ಶಿಕ್ಷಣ ಪಡೆಯಲು ಬೇರೆ ಬೇರೆ ಇಲಾಖೆಗಳಿಗೆ ದಾಖಲೆಗಳನ್ನು ಒದಗಿಸಲು ತೊಂದರೆಯಾಗುತ್ತಿರುವ ಕಾರಣ ಈ ವ್ಯವಸ್ಥೆಯನ್ನು ಎಲ್ಲ ಗ್ರಾಮಒನ್, ಪಂಚಾಯಿತಿಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಬೇಕು, ಇದರಿಂದಾಗಿ ಸೌಲಭ್ಯವನ್ನು ಪಡೆದುಕೊಳ್ಳಲು ಅನುಕೂಲವಾಗುತ್ತದೆ ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಚಿವರು ಕೂಡಲೇ ಜನಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಒತ್ತಾಯ ಮಾಡಿದರು.