ದಾಂಡೇಲಿಯ ಶ್ರೀ.ಮೃತ್ಯುಂಜಯ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯುತ್ತಿರುವ ಶಿವ ಶರಣರ ಜ್ಞಾನಾಮೃತ ದಾಸೋಹ

ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದ ಶ್ರೀ.ಮೃತ್ಯುಂಜಯ ಮಠದಲ್ಲಿ ಶ್ರೀ ವೀರಶೈವ ಸೇವಾ ಸಂಘ ಕಮಿಟಿಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶಿವ ಶರಣರ ಜ್ಞಾನಮೃತ ದಾಸೋಹ ಕಾರ್ಯಕ್ರಮವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗುತ್ತಿದೆ.

ಗದಗ ಜಿಲ್ಲೆಯ ನವಲಗುಂದ ತಾಲ್ಲೂಕಿನ ವೇದಮೂರ್ತಿ ಶ್ರೀ.ವೀರಯ್ಯಾ ಶಾಸ್ತ್ರಿಗಳವರಿಂದ ಇಂದು ಸೋಮವಾರ ಏಳುವರೆ ಗಂಟೆಗೆ ಆರಂಭವಾದ ಪ್ರವಚನ ಕಾರ್ಯಕ್ರಮವು ರಾತ್ರಿ 9 ಗಂಟೆಗೆ ಸಂಪನ್ನುಗೊಂಡಿತು. ಶ್ರಾವಣ ಮಾಸದ ಕಡೆಯ ಸೋಮವಾರವಾದ ಇಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

ಪ್ರವಚನ ಕಾರ್ಯಕ್ರಮ ಸಂಪನ್ನಗೊಂಡ ನಂತರ ಸಾರ್ವಜನಿಕ ಅನ್ನಪ್ರಸಾದವನ್ನು ವಿತರಿಸಲಾಯ್ತು.

ಈ ಸಂದರ್ಭದಲ್ಲಿ ವೀರಶೈವ ಸೇವಾ ಸಂಘದ ಗೌರವಾಧ್ಯಕ್ಷರಾದ ಕೆ.ಬಿ.ನಂಜುಂಡಪ್ಪ,ಅಧ್ಯಕ್ಷರಾದ ಬಸವರಾಜ ಕಲಶೆಟಿ, ಪ್ರಧಾನ ಕಾರ್ಯದರ್ಶಿ ಚಂದ್ರು ಮಾಳಿಯವರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರು ಮತ್ತು ಸಮಾಜ ಬಾಂಧವರ ಸಹಕಾರದಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದೆ.