ಬೆಂಗಳೂರಿನ ವಿಕಾಸಸೌಧದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ದೇಶಪಾಂಡೆ ಚರ್ಚೆ

ಹಳಿಯಾಳ : ಕ್ಷೇತ್ರದ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕಿಗೆ ವಸತಿ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ದೊರೆಯಲಿರುವ ಯೋಜನೆಗಳು ಮತ್ತು ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ವಿಚಾರವಾಗಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಇಂದು ವಿಕಾಸಸೌಧದಲ್ಲಿ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ‌ ಮಾಡಿ ಕೆಲವು ಹೊತ್ತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ವಸತಿ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳನ್ನು ವಿಶೇಷ ಆದ್ಯತೆಯಲ್ಲಿ ಮಂಜೂರು ಮಾಡುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಕಾರ್ಯದರ್ಶಿಗಳು, ನಿರ್ದೇಶಕರು, ಆಯುಕ್ತರು ಹಾಗೂ ಸಂಬಂಧಿಸಿದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.