ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಾಲೂಕಿನ ವಿವಿದೆಡೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.‌

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ತಾಲೂಕಿನ ವಿವಿದೆಡೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.‌
ತಾಲೂಕಿನ ಅರೇಹಳ್ಳದಲ್ಲಿ ಗ್ರಾಮ ಅರಣ್ಯ ಸಮಿತಿ ವತಿಯಿಂದ ನಿರ್ಮಿಸಿದ ಪರಿಸರ ಭವನ ಉದ್ಘಾಟಿಸಿ ನಂತರ ಅತ್ತಿಸವಲು ಹಾಗೂ ಕುಳಿಕಟ್ಟು ಗ್ರಾಮದಲ್ಲಿ ಸ್ಥಳೀಯ ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಚುನಾವಣೆಯಲ್ಲಿ ಹಗಲಿರುಳು ದುಡಿದ ಕಾರ್ಯಕರ್ತರು, ಮುಖಂಡರು ಮತ್ತು ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಇದರ ಮಧ್ಯೆ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಕುಂದು-ಕೊರತೆ ಆಲಿಸಿದರು‌. ಸಂಜೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿ ಸಮಿತಿಯ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಕೋರಿದರು. ತದನಂತರ ಕಿಲಾರ ಗ್ರೂಫ್ ಟೆನೆಂಟ್ ಫಾರ್ಮಿಂಗ್ ಸೊಸೈಟಿ ವತಿಯಿಂದ ಆಯೋಜಿಸಿದ ರೈತ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆ ನೀಡಿದರು.