ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟಿಸಿದ ದಿನಕರ ಶೆಟ್ಟಿ

ಕುಮಟಾ : ತಾಲೂಕಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಗಿಯಲ್ಲಿ ನೆರವೇರಿದ ಕುಮಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿಯವರು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಲ್. ಭಟ್, ಪುರಸಭಾ ಸದಸ್ಯರಾದ ಸಂತೋಷ ನಾಯ್ಕ್, ಸುಮತಿ ಭಟ್ ಹಾಗೂ ಅಭಿ ಚಂದ್ರಹಾಸ ನಾಯ್ಕ್, ಜಿ. ಪಂ. ಅಭಿಯಂತರ ಸಂಜೀವ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್. ಬಿ. ನಾಯ್ಕ್, SDMC ಅಧ್ಯಕ್ಷ ರಾಘವೇಂದ್ರ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ್ ಪಟಗಾರ, ಸಿ. ಆರ್. ಪಿ. ಮಹೇಶ ನಾಯ್ಕ್, ಮುಖ್ಯ ಶಿಕ್ಷಕ ಪಾಂಡುರಂಗ ಹುಲಸ್ವಾರ ಅವರು ವೇದಿಕೆಯಲ್ಲಿ ಇದ್ದರು.