ಶ್ರೀ.ಭುವನೇಶ್ವರಿ ದೇವಿ ಮಂದಿರದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯುತ್ತಿರುವ ಶ್ರಾವಣ ಸಂಭ್ರಮ

ದಾಂಡೇಲಿ : ನಗರದ ಡಿ.ಎಫ್.ಎ ಆವರಣದಲ್ಲಿರುವ ಶ್ರೀ.ಭುವನೇಶ್ವರಿ ದೇವಿ ಮಂದಿರದಲ್ಲಿ ಶ್ರಾವಣ ಮಾಸದ ನಿಮಿತ್ತ ಪ್ರತಿದಿನವೂ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇಂದು ಕೂಡ ಶ್ರಾವಣ ಸಂಭ್ರಮ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಹಮ್ಮಿಕೊಳ್ಳಲಾಗಿತ್ತು.

ನಗರದ ಶ್ರೀ.ಸತ್ಯ ಸಾಯಿ ಸೇವಾ ಸಮಿತಿಯ ವತಿಯಿಂದ ಸಾಯಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ.ಸತ್ಯ ಸಾಯಿ ಸೇವಾ ಸಮಿತಿಯ ಭಜನಾ ತಂಡ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟಿತು.

ಶ್ರಾವಣ ಮಾಸದ ಪ್ರತಿದಿನವೂ ಶ್ರೀ.ಭುವನೇಶ್ವರಿ ದೇವಿಯನ್ನು ವಿಶೇಷವಾಗಿ ಅಲಂಕರಿಸಲಾಗಿ ಪೂಜೆಯನ್ನು ಸಲ್ಲಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಶ್ರೀ ಸ್ವಾಮಿ ಸನ್ನಿಧಿಗೆ ಆಗಮಿಸಿ, ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.