ಗಾಂಧಿವನದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕುಮಟಾ: ತಾಲೂಕಿನ ಹೊಲನಗದ್ದೆ ಗ್ರಾ.ಪಂ ವ್ಯಾಪ್ತಿಯ ಕಡ್ಲೆಯ ಗಾಂಧಿವನ ಕ್ರೀಡಾಂಗಣದಲ್ಲಿ ಶ್ರೀಲಕ್ಷ್ಮೀನರಸಿಂಹ ಗ್ರಾಮ ಅರಣ್ಯ ಸಮಿತಿ ಮತ್ತು ಅರಣ್ಯ ಇಲಾಖೆಯ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯರ ಹೋರಾಟದ ಫಲವಾಗಿ ಗಾಂಧಿವನ ಆಟದ ಮೈದಾನವು ಉಳಿದುಕೊಂಡಿದ್ದು, ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಿವೇಕ ಹೆಗಡೆ ಅಭಿಪ್ರಾಯಪಟ್ಟರು.

ಅರಣ್ಯ ಇಲಾಖೆ ಅಧಿಕಾರಿ ಎಸ್.ಪಿ.ಪಟಗಾರ, ಗ್ರಾ.ಪಂ ಸದ್ಯರಾದ ಅನುರಾಧಾ ಭಟ್ಟ, ರಾಘು ಪಟಗಾರ, ಪ್ರಮುಖರಾದ ರಾಮ ಮಡಿವಾಳ, ಈಶ್ವರ ಪಟಗಾರ, ಶಶಿಕಲಾ ಭಟ್ಟ ಮತ್ತಿತರರು ಇದ್ದರು.