ಪ್ರವಾಹಪೀಡಿತ ಸ್ಥಳಕ್ಕೆ ಶಾಸಕ ಸುನೀಲ್ ನಾಯ್ಕ್, ಗೋವಿಂದ ನಾಯ್ಕ್ ವಿಸಿಟ್

ಭಟ್ಕಳ: ತಾಲೂಕಿನಾದ್ಯಂತ ಸುರಿದ ಮಳೆಗೆ ಅಕ್ಷರಶಃ ಭಟ್ಕಳ ಜನತೆ ನಲುಗಿದ್ದು ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಸುನೀಲ ನಾಯ್ಕ ಹಾಗೂ ರಾಜ್ಯ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷರಾದ ಗೋವಿಂದ ನಾಯ್ಕ ಭೇಟಿ ನೀಡಿದ್ದಾರೆ .

ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಸುನೀಲ ನಾಯ್ಕ ಹಾಗೂ ಗೋಂವಿದ ನಾಯ್ಕ ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುವಲ್ಲಿ ಮುಂದಾಗಿದ್ದರು. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಕುಮಟಾದಿಂದ ಎಸ್.ಡಿ.ಆರ್.ಎಫ್ ತಂಡ ಭಟ್ಕಳಕ್ಕೆ ಅಗಮಿಸಿದೆ.