ಸ್ವಚ್ಛ‌ ಪರಿಸರ ನಿರ್ಮಾಣ ನಮ್ಮ ಆದ್ಯ ಕರ್ತವ್ಯ-ಡಾ.ಲಕ್ಷ್ಮೀದೇವಿ

ಹಳಿಯಾಳ : ಸ್ವಚ್ಛ ಪರಿಸರವಿದ್ದಲ್ಲಿ ಸದೃಢ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ನಾವು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಭಾರತ ನಿರ್ಮಾಣಕ್ಕೆ ನಮ್ಮನ್ನು ನಾವು ಪರಿಪೂರ್ಣ ಮನಸ್ಸಿನಿಂದ ತೊಡಗಿಸಿಕೊಳ್ಳಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ. ಲಕ್ಷ್ಮೀದೇವಿ ಅವರು ಹೇಳಿದರು

ಅವರು ಹಳಿಯಾಳ ಪಟ್ಟಣದಲ್ಲಿರುವ ಇಂದಿರಾ ನಗರದ ಅಂಗನವಾಡಿ ಕೇಂದ್ರ ಹಾಗೂ ಸುತ್ತಮುತ್ತಲು ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡುತ್ತಿದ್ದರು. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸ್ವಚ್ಛತೆಯ ಅನಿವಾರ್ಯತೆಯನ್ನು ಈ ಸಂದರ್ಭದಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿಯರಾದ ಅನಸೂಯಾ ರೇಡೆಕರ, ಅಂಬಿಕಾ ಕಟಕೆ, ಜಯಶ್ರೀ ಮೊರಬದ್, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.