ಮುಟ್ಟಳ್ಳಿಯಲ್ಲಿ ಗೌರಮ್ಮಜ್ಜಿ ಮನೆ ಕುಸಿತ

ಭಟ್ಕಳ: ತಾಲೂಕಿನ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿತದಿಂದಾಗಿ ಗೌರಮ್ಮಜ್ಜಿ ಮನೆ ನೆಲಸಮವಾಗಿದೆ. ಮನೆಯಲ್ಲಿ ನಾಲ್ವರು ವಾಸವಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಸಿಲುಕಿಕೊಂಡಿದ್ದಾರೆ. ನಾಲ್ವರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ. ಅವಶೇಷಗಳಡಿ ನಾಲ್ವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡದ ಮಣ್ಣು ಕುಸಿದಿದ್ದರಿಂದ ಗೌರಮ್ಮಜ್ಜಿ ಮನೆ ಕುಸಿತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಬುಲ್ಡೋಝರ್ ಸ್ಥಳಕ್ಕೆ ತೆರಳಲು ಸಾಧ್ಯವಾಗದ್ದರಿಂದ ಸ್ಥಳೀಯರಿಂದಲೇ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಬುಲ್ಡೋಝರ್ ಕೊಂಡೊಯ್ಯಲು ಅಧಿಕಾರಿಗಳು, ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ