ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆಯಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ

ದಾಂಡೇಲಿ : ಗಾಂಧಿ ಜಯಂತಿ ಹಾಗೂ 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮದಲ್ಲಿ ದಾಂಡೇಲಿ ಅರಣ್ಯ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಶೇಠ್ ಅವರ ಮಾರ್ಗದರ್ಶನದಲ್ಲಿ ವಲಯರಣ್ಯಾಧಿಕಾರಿ ಅಪ್ಪರಾವ್ ಕಲಶೆಟ್ಟಿಯವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳ ತಂಡ ನಗರದ ಅರಣ್ಯ ವಸತಿ ಗೃಹ, ಮುಖ್ಯರಸ್ತೆ, ವಲಯಾರಣ್ಯಾಧಿಕಾರಿ ಕಚೇರಿಯ ಹಾಗೂ ಮರಮುಟ್ಟು ಸಂಗ್ರಹಾಲಯದ ಆವರಣದಲ್ಲಿದ್ದ ಕಸ, ಪ್ಲಾಸ್ಟಿಕ್ ತ್ಯಾಜವನ್ನು ಸಂಗ್ರಹಿಸಿ ವಿಲೇವಾರಿ ಮಾಡಿದರು.