ಬೀದಿನಾಯಿಗಳ ದಾಳಿಗೆ ತುತ್ತಾದ ಜಿಂಕೆ : ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

ಜೋಯಿಡಾ : ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣದ ಸಮೀಪದಲ್ಲಿರುವ ಭತ್ತದ ಗಿರಣಿಯ ಹತ್ತಿರ ಬಿದಿ ನಾಯಿಗಳ ದಾಳಿಗೆ ಜಿಂಕೆ ಎಂದು ತುತ್ತಾಗಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಮಂಗಳವಾರ ನಡೆದಿದೆ.

ಆಹಾರವನ್ನರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆಮರಿಯನ್ನು ಬೀದಿನಾಯಿಗಳು ಬೆನ್ನಟ್ಟಿವೆ. ಈ ಸಂದರ್ಭದಲ್ಲಿ ಸ್ಥಳೀಯರು ಬೀದಿ ನಾಯಿಗಳ ದಾಳಿಯಿಂದ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ. ಆದಾಗಿಯೂ ಜಿಂಕೆಯ ಕಾಲಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ಜಿಂಕೆಯನ್ನು ಪಶುವೈದ್ಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ನೀಡಲಾಗುತ್ತಿದೆ.