ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮಂಜೂರು

ಹಳಿಯಾಳ : ದಾಂಡೇಲಿ ತಾಲೂಕಿನ ಸೀಮಾ ಮಹಮ್ಮದ್ ಅಪ್ಜಲ್ ಖಾನ್ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ:40,000/- ಮಂಜೂರು ಮಾಡಲಾಗಿದೆ.

ಹೃದಯ ಸಂಬಂಧಿ ಶಾಸ್ತ್ರ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಅರ್ಜಿಯನ್ನು ಸಲ್ಲಿಸಿದರು. ಈ ಅರ್ಜಿಯ ಕುರಿತಂತೆ ಆರೋಗ್ಯದ ಹಿತದೃಷ್ಟಿಯಿಂದ ಶಾಸಕ ಆರ್.ವಿ.ದೇಶಪಾಂಡೆಯವರು ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿಗಳಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದ್ದರು. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 40,000/- ರೂಪಾಯಿ ಪಲಾನುಭವಿಯ ಬ್ಯಾಂಕ್ ಖಾತೆಗೆ ಜಮಾವಾಗಿದೆ‌ ಎಂದು ಹಳಿಯಾಳ ಪಟ್ಟಣದಲ್ಲಿ ಶಾಸಕರ ಕಾರ್ಯಾಲಯವು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ.