ರೋಹನ್ ಕೃಷ್ಣಾನಂದ ಕಿಣಿ ಕಾರವಾರದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಹೊನ್ನಾವರ: ತಾಲೂಕಿನ ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ರೋಹನ್ ಕೃಷ್ಣಾನಂದ ಕಿಣಿ , ಕಾರವಾರದಲ್ಲಿ ಜರುಗಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಇವನ ಸಾಧನೆಯನ್ನು ಕೊಂಡಾಡಿದ ಆಡಳಿತ ಮಂಡಳಿಯ ಅಧ್ಯಕ್ಷರಾದ ಉಮೇಶ ಹೆಗಡೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಗೌರವಾಧ್ಯಕ್ಷರಾದ ವಿ ಜಿ ಹೆಗಡೆ ಗುಡ್ಗೆ, ಆಡಳಿತಾಧಿಕಾರಿ ಎಂ ಎಸ್ ಹೆಗಡೆ ಗುಣವಂತೆ, ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್, ದೈಹಿಕ ಶಿಕ್ಷಕ ಹರೀಶ್ ಸಂಕೋಳ್ಳಿ, ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ಊರ ನಾಗರಿಕರು ಅಭಿನಂದಿಸಿ ಶುಭ ಕೋರಿದರು. ರಾಜ್ಯಮಟ್ಟದ ಚೆಸ್ ಸ್ಪರ್ಧೆ ಬೆಂಗಳೂರಿನಲ್ಲಿ ಜರುಗಲಿದೆ.