ಅಡಿಕೆಗೆ ಎಲೆ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ರೈತರು ಕಂಗಲಾಗಿದ್ದಾರೆ -ಮಾರುತಿ ನಾಯ್ಕ್

ಸಿದ್ದಾಪುರ : ತಾಲೂಕಿನಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ರೈತರು ಕಂಗಲಾಗಿದ್ದಾರೆ ಕೂಡಲೇ ರೈತರಿಗೆ ಉಚಿತವಾಗಿ ಔಷಧಿ ವಿತರಣೆ ಮಾಡಬೇಕು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ್ ಸುದ್ದಿಗೋಷ್ಠಿಯಲ್ಲಿ ಒತ್ತಾಯ ಮಾಡಿದರು. ತಾಲೂಕಿನಲ್ಲಿ ಅಡಿಕೆ ಬೆಳೆಗಾರರ ಸಂಖ್ಯೆ ಅತಿ ಹೆಚ್ಚಿನ ಪ್ರಮಾಣದಲ್ಲಿದ್ದು ಈ ರೋಗ ಬಾಧಿಸಿರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ ಕೂಡಲೇ ಅಧಿಕಾರಿಗಳು, ಶಾಸಕರು,ಸಚಿವರು, ಸರ್ಕಾರ ರೈತರ ಸಮಸ್ಯೆಗೆ ಶೀಘ್ರದಲ್ಲೇ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆ ದೂರಪಡಿಸಬೇಕು ಎಂದು ಮನವಿ ಮಾಡಿದರು. ಮುಖ್ಯ ರಸ್ತೆಗಳಲ್ಲಿ ಹೊಂಡಗಳು ಬಿದ್ದಿದ್ದು ವಾಹನಸವಾರಿಗೆ ತೊಂದರೆ ಉಂಟಾಗುತ್ತಿದೆ, ಹಲವರಿಗೆ ಅಪಾಯಗಳು ಆಗಿರುವ ಉದಾಹರಣೆಗಳಿವೆ , ಹೊಂಡಗಳನ್ನು ಮುಚ್ಚಲು ಆಗದಿದ್ದರೆ ಅಲ್ಲಿ ಹೊಂಡ ಇದೆ ಎಂದು ಬೋರ್ಡ್ ಹಾಕಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಗುರುರಾಜ್ ಶಾನ್ ಬಾಗ್, ನಂದನ ಬೋರ್ಕರ್, ಎಂ.ಕೆ. ತಿಮ್ಮಪ್ಪ ಮುಂತಾದವರು ಉಪಸ್ಥಿತರಿದ್ದರು