ಲಕ್ಷಾಂತರ ರೂ ಮೌಲ್ಯದ ಚಿನ್ನ ಹಾಗೂ ನಗದನ್ನು ಮಹಿಳೆಗೆ ವಾಪಸ್‌ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.

ಮುರುಡೇಶ್ವ: ಇಂದಿನ ಕಾಲದಲ್ಲಿ ಬಿಟ್ಟಿ ದುಡ್ಡು ಅಥವಾ ಬೆಲೆ ಬಾಳುವ ವಸ್ತುಗಳು ಸಿಕ್ಕಿತೆಂದರೆ ದುರುಪಯೋಗಪಡಿಸಿಕೊಳ್ಳುವವರೇ ಹೆಚ್ಚು. ಅಂತದ್ದರಲ್ಲಿ ಇಲ್ಲೊಬ್ಬ ಆಟೋ ಡ್ರೈವರ್​ ಆಟೋದಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ
ಚಿನ್ನಾಭರಣ ಹಾಗೂ  ನಗದನ್ನು ಮಹಿಳೆಗೆ ವಾಪಸ್ ನೀಡುವ ಮೂಲಕ ಮುರುಡೇಶ್ವ ಆಟೋ ಚಾಲಕ  ಪ್ರಾಮಾಣಿಕತೆ ಮೆರೆದಿದ್ದಾರೆ. ಆಟೋ ಚಾಲಕನ ಪ್ರಾಮಾಣಿಕ ಕಾರ್ಯಕ್ಕೆ ಮೆಚ್ಚಿ ಪೊಲೀಸರು ಸನ್ಮಾನ ಮಾಡಿದ್ದಾರೆ

ಚಿನ್ನಾಭರಣ ಮರಳಿ ನೀಡಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ  ಚಂದ್ರು ರಾಮ ನಾಯ್ಕ ತಾಲೂಕಿನ ಶಿರಾಣಿ ನಿವಾಸಿಯಾಗಿದ್ದಾನೆ. ಈತ ಬಸ್ತಿ ಕಾಯ್ಕಿಣಿಯ ದೇವಿಕಾನನಿಂದ  ವಿಜಯಲಕ್ಷ್ಮಿ ಎಂಬ ಮಹಿಳೆಯನ್ನು ಆಯ್ಕೆಯ ಗಂಡನ ಮನೆಯಿಂದ ಭಟ್ಕಳ ತೆಂಗಿನ ಗುಂಡಿ ತಾಯಿಯ ಮನೆಗೆ ಬಾಡಿಗೆ ಬಿಟ್ಟು ಬರುವ ವೇಳೆ ಮಹಿಳೆ ತನ್ನ ಚಿನ್ನಾಭರಣವುಳ್ಳ ಬ್ಯಾಗ್ ನ್ನು ಆಟೋ ಹಿಂಭಾಗದಲ್ಲಿ ಬಿಟ್ಟು ತೆರಲಿದ್ದಾಳೆ. ಬಳಿಕ ಆಟೋ ಚಾಲಕ ಮರಳಿ ಮುರುಡೇಶ್ವ ಕಡೆಗೆ ಹೋಗುವ  ವೇಳೆಯಲ್ಲಿ ಖಾಲಿ ಹೋಗುವ ಬದಲು ಮೂರ್ನಾಲ್ಕು ಜನ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಾನೆ. ನಂತರ ಆಯಾ ಪ್ರಯಾಣಿಕ ನಿಲ್ದಾಣದಲ್ಲಿ ಬಿಟ್ಟ ಆಟೋ ಚಾಲಕ ನೇರ ಮುರುಡೇಶ್ವಕ್ಕೆ ಬಂದಾಗ ತನ್ನ ಆಟೋ ಹಿಂಬಾಗದಲ್ಲಿ ಒಂದು ಬ್ಯಾಗ್ ಇರುವುದನ್ನು ಗಮನಿಸಿ ಬ್ಯಾಗ್ ಪರಿಶೀಲನೆ ನಡೆಸುತ್ತಾರೆ. ಬಳಿಕ ಅದರಲ್ಲಿ 5 ರಿಂದ 6 ಲಕ್ಷ ಮೌಲ್ಯದಚಿನ್ನಾಭರಣ ಹಾಗೂ 10 ಸಾವಿರ ನಗದು ಇರುವುದು ತಿಳಿದಾಗ ತಕ್ಷಣ ಆಟೋ ಚಾಲಕ ಸಂಘದ ಪ್ರಮುಖರಿಗೆ ಮಾಹಿತಿ ತಿಳಿಸುತ್ತಾನೆ. ಅಷ್ಟರಲ್ಲಾಗಲೇ ಮಹಿಳೆ ತಾನು ಆಟೋದಲ್ಲಿ ಚಿನ್ನಾಭರಣವುಳ್ಳ ಬ್ಯಾಗ್ ಕಳೆದುಕೊಂಡಿರುವುದು ನೆನಪಾಗಿ ತನ್ನ ಸಂಬಂಧಿ ಆಟೋ ಚಾಲಕರಿಗೆ ಮಾಹಿತಿ ತಿಳಿದ್ದಾರೆ. ಇದರಿಂದಾಗಿ ಚಿನ್ನಾಭರಣ ಕಳೆದುಕೊಂಡ ಮಹಿಳೆ ಪತ್ತೆಯಾಗಿದ್ದಾಳೆ. ಬಳಿಕ ಮಹಿಳೆಗೆ ಮುರುಡೇಶ್ವರ ಪೊಲೀಸ ಠಾಣೆಗೆ ಬರಲು ಮಾಹಿತಿ ನೀಡಿದ್ದಾರೆ.
ನಂತರ ಮುರುಡೇಶ್ವ ಪೊಲೀಸ ಠಾಣೆಗೆ ಬಂದು ಮಹಿಳೆ ಪೊಲೀಸರ ಮುಖಾಂತರ ತನ್ನ ಚಿನ್ನಾಭರಣ ತೆಗೆದುಕೊಂಡು ಆಟೋ ಚಾಲಕನಿಗೆ ಧನ್ಯವಾದ ತಿಳಿಸಿದ್ದಾಳೆ.

ಈ ಹಿನ್ನೆಲೆಯಲ್ಲಿ ಮುರುಡೇಶ್ವ ಪೋಲಿಸ ಠಾಣೆವತಿಯಿಂದ ಆಟೋ ಚಾಲಕನಿಗೆ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ರಿಕ್ಷಾ ಮಾಲಕರ ಹಾಗೂ ಚಾಲಕರ ಸಂಘ ಮಾವಳ್ಳಿ, ಮುರ್ಡೇಶ್ವರದ ವತಿಯಿಂದ  ಕೂಡ ಆಟೋ ಚಾಲಕನಿಗೆ ಅಭಿನಂದನೆ ಸಲ್ಲಿಸಿದ್ದಾರೆ