ಸಿದ್ದಾಪುರದ ಹೆಗ್ಗರಣಿಯಲ್ಲಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ ಭೀಮಣ್ಣ ನಾಯ್ಕ

ಸಿದ್ದಾಪುರ :- ಸಿದ್ದಾಪುರ ತಾಲೂಕಿನ ಹೆಗ್ಗರಣಿ ಗ್ರಾ.ಪಂ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳಿಗೆ ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ್ರು..

ವಸತಿ ಯೋಜನೆಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿ ಮಾತನಾಡಿದ ಭೀಮಣ್ಣ ನಾಯ್ಕ, ಸರ್ಕಾರದ ವಸತಿ ಯೋಜನೆಯ ಸದುಪಯೋಗ ಕಟ್ಟ ಕಡೆಯ ವ್ಯಕ್ತಿಗೂ ಸಿಗಬೇಕು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು ಎಂದರು. ಇದೇ ವೇಳೆ ಅಂಗಡಿಕಾರರಿಗೆ ಗ್ರಾಮ ಪಂಚಾಯ್ತಿಯ ಕಸದಬುಟ್ಟಿಯನ್ನು ಸಹ ವಿತರಿಸಿದ್ರು….


ಈ ವೇಳೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿ, ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು, ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ರು..

ದಿವಾಕರ ನಾಯ್ಕ ನುಡಿಸಿರಿ ನ್ಯೂಸ್‌, ಸಿದ್ದಾಪುರ