ಯಲ್ಲಾಪುರದ ಪಟಾಕಿ ದಾಸ್ತಾನು ಮಳಿಗೆಗಳಿಗೆ ಅಧಿಕಾರಿಗಳ ತಂಡ ಭೇಟಿ

ಯಲ್ಲಾಪುರ: ತಾಲೂಕಿನ ವಿವಿಧೆಡೆಯ ಪಟಾಕಿ ದಾಸ್ತಾನು ಮಳಿಗೆಗಳಿಗೆ ತಹಸೀಲ್ದಾರ ಎಂ.ಗುರುರಾಜ ಅವರ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು.
ಪಟಾಕಿ ದಾಸ್ತಾನು ಮಳಿಗೆಯ ಪರವಾನಿಗೆ, ಮಾರಾಟ ಮಳಿಗೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಸುರಕ್ಷತೆ ಕುರಿತು ಅವರು ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಲಾಯಿತು. ಕಟ್ಟುನಿಟ್ಟಾಗಿ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಯಿತು.
ಪಿಎಸ್ಐ ರವಿ ಗುಡ್ಡಿ, ಹೆಸ್ಕಾಂ ಸೆಕ್ಷನ್ ಅಧಿಕಾರಿ ರಮಾಕಾಂತ ನಾಯ್ಕ, ಕಂದಾಯ ನಿರೀಕ್ಷಕರು, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.