ಚಂದಾವರದ ನೂರಾಹ್ನಿ ಮೊಹಲ್ಲಾದ ತಿರುವಿನಲ್ಲಿ ವ್ಯಕ್ತಿಯೊರ್ವ ಬೈಕ್ ನಿಂದ ಬಿದ್ದು ಗಂಭೀರ ಗಾಯ

ಹೊನ್ನಾವರ : ತಾಲೂಕಿನ ಚಂದಾವರದ ನೂರಾಹ್ನಿ ಮೊಹಲ್ಲಾದ ತಿರುವಿನಲ್ಲಿ ವ್ಯಕ್ತಿಯೊರ್ವ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಇಲ್ಲಿನ ಕೆನರಾ ಬ್ಯಾಂಕ್ ನಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೃಷ್ಣಮೂರ್ತಿ ಕೆ. ನಾಯ್ಕ ಎಂಬುವರು ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಘಟನೆ ನಡೆದಿದ್ದು,ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಆಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.