ಸಿದ್ದಾಪುರ :- ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಪ್ರದೇಶವನ್ನು ಸೂಕ್ಷ್ಮ ಪ್ರದೇಶದಿಂದ ಮುಕ್ತಗೊಳಿಸುವಂತೆ ಮನವಿ

ಸಿದ್ದಾಪುರ : ಕಸ್ತೂರಿ ರಂಗನ್ ವರದಿಯ ಪ್ರಕಾರ ತಾಲೂಕಿನ 98 ಹಳ್ಳಿಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿದ್ದು ಇವುಗಳನ್ನ ಸೂಕ್ಷ್ಮ ಪ್ರದೇಶದಿಂದ ಮುಕ್ತಗೊಳಿಸಲು ನಿರ್ಣಯಿಸುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರುಗಳಿಗೆ ಅರಣ್ಯ ಭೂಮಿ ಹಕ್ಕು ಹೋರಾಟ ಸಮಿತಿಯಿಂದ ಮನವಿ ಮಾಡಿದರು. ವರದಿಯಲ್ಲಿ ಗುರುತಿಸಿರುವ ಹಳ್ಳಿಗಳನ್ನ ಸೇರಿಸಲು ವಿರೋಧಿಸಿ, ಆಕ್ಷೇಪಣೆಯ ನಿರ್ಣಯವನ್ನ ಗ್ರಾಮ ಪಂಚಾಯತ ಸಭೆಯಲ್ಲಿ ನಿರ್ಣಯಿಸಲು ಆಗ್ರಹಿಸಿದರು.
ನಿಲ್ಕುಂದ, ಹೆಗ್ಗರಣಿ, ತಂಡಾಗುಂಡಿ ಅಧ್ಯಕ್ಷರುಗಳಿಗೆ ಹೋರಾಟ ವೇದಿಕೆಯವರು ಮನವಿ ನೀಡಿದರು. ಈ ಸಂದರ್ಭದಲ್ಲಿ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಮುಖರು ಉಪಸ್ಥಿತರಿದ್ದರು.