ಸಿದ್ದಾಪುರ ನಾಡಹಬ್ಬ ಉತ್ಸವ ಸಮಿತಿಯಿಂದ ಅದ್ದೂರಿ ಕಾರ್ಯಕ್ರಮ

ಸಿದ್ದಾಪುರ : ನಾಡಹಬ್ಬ ಉತ್ಸವ ಸಮಿತಿ ಸಿದ್ದಾಪುರ ಇವರಿಂದ ಪಟ್ಟಣದ ಅಂಬೇಡ್ಕರ್ ಸರ್ಕಲ್ ನಲ್ಲಿ ನವರಾತ್ರಿ ಉತ್ಸವ ನಿಮಿತ್ತ ದೇವಿ ಮೂರ್ತಿ ಪ್ರತಿಷ್ಠಾಪಿಸಿದ್ದು ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತಿದೆ, ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅನ್ನಪ್ರಸಾದ ಸ್ವೀಕರಿಸಿದರು. ಅಕ್ಟೋಬರ್ 15 ರಿಂದ ಆರಂಭವಾದ ಪೂಜಾ ಕಾರ್ಯಕ್ರಮಗಳು 24ರ ವರೆಗೆ ನಡೆಯಲಿದೆ. ಮಂಗಳವಾರ ಅದ್ದೂರಿ ಮೆರವಣಿಗೆಯ ಮೂಲಕ ಉತ್ಸವ ಮೂರ್ತಿ ವಿಸರ್ಜನೆ ಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ. ಶನಿವಾರ ಮನೋರಂಜನ ಕಾರ್ಯಕ್ರಮ ರವಿವಾರ ಕೇಶವ ಮೆಲೋಡಿಸ್ ರಿಂದ ಸಂಗೀತ ಕಾರ್ಯಕ್ರಮ, ಸೋಮವಾರ 14 ವರ್ಷದ ಒಳಗಿನ ಮಕ್ಕಳಿಗಾಗಿ ಛದ್ಮ ವೇಷ ಸ್ಪರ್ಧೆ ಕಾರ್ಯಕ್ರಮ ನಡೆಯಲಿದೆ.