ದಾಂಡೇಲಿಯಲ್ಲಿ ತಾಲ್ಲೂಕಾಡಳಿತ & ನಗರಾಡಳಿತದ ಆಶ್ರಯದಡಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ದಾಂಡೇಲಿ : ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜನ್ಮ ಜಯಂತಿ ಕಾರ್ಯಕ್ರಮವನ್ನು ಇಂದು ಸೋಮವಾರ ಹಮ್ಮಿಕೊಳ್ಳಲಾಯಿತು.

ಆರಂಭದಲ್ಲಿ ನಗರದ ಅಂಬೇವಾಡಿಯಲ್ಲಿರುವ ತಾಲೂಕಾಡಳಿತ ಸೌಧದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ ಹಾಗೂ ನಗರಸಭೆಯ ಪೌರಾಯುಕ್ತರಾದ ಆರ್ ಎಸ್ ಪವಾರ್ ಅವರು ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಪೂಜೆಯನ್ನು ಸಲ್ಲಿಸಿದರು.

ಆನಂತರ ನಗರದ ಕೆ.ಸಿ ವೃತ್ತದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಿ ಗೌರವವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು, ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.