ಗ್ರೂಪ್ ಡಿ ನೌಕರರಿಂದ ಸಚಿವರಿಗೆ ಸನ್ಮಾನ

ಅಂಕೋಲಾ: ಅನುದಾನಿತ ಪ್ರೌಢಶಾಲೆಗಳಲ್ಲಿ ಅನುದಾನ ರಹಿತವಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಡಿ ನೌಕರರ ಸಂಘದಿಂದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಅನುದಾನ ರಹಿತ ನೌಕರರನ್ನು ಖಾಯಂಗೊಳಿಸುವ ಕಡತದ ಶೀಘ್ರ ವಿಲೇವಾರಿಗೆ ಸಂಭಂದಿಸಿದಂತೆ ಸಚಿವರಿಗೆ ನೌಕರರು ಮನವಿ ಸಲ್ಲಿಸದರು.
ಮನವಿ ಸ್ವೀಕರಿಸಿದ ಸಚಿವರು ಇದು ಇಡೀ ರಾಜ್ಯದ ಸಮಸ್ಯೆಯಾಗಿದ್ದು ಶೀಘ್ರದಲ್ಲಿಯೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನೌಕರರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ವಿವಿಧ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.