ದಾಂಡೇಲಿ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ಯುವಕ ನೇಣಿಗೆ ಶರಣು

ದಾಂಡೇಲಿ : ತಾಲೂಕಿನ ಅಂಬಿಕಾನಗರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೊಮ್ಮನಹಳ್ಳಿಯಲ್ಲಿ ಯುವಕನೋರ್ವ ನೇಣಿಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ.

ಬೊಮ್ಮನಹಳ್ಳಿಯಲ್ಲಿರುವ ಹೋಂ ಸ್ಟೇಯೊಂದರಲ್ಲಿ ಕೆಲಸಕ್ಕೆ ಇದ್ದ ಯುವಕನೋರ್ವ ಯಾವುದೋ ವಿಷಯವನ್ನು ಮನಸ್ಸಿಗೆ ಹೆಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹಳಿಯಾಳ ತಾಲೂಕಿನ ಪಾಂಡರವಾಳ ಗ್ರಾಮದ ನಿವಾಸಿ 30 ವರ್ಷ ವಯಸ್ಸಿನ ನಕುಲ್ ಪೂನಪ್ಪ ಶಿಂಧೆ ಎಂಬಾತನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ.

ಈ ಬಗ್ಗೆ ಅಂಬಿಕಾನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಮೃತ ದೇಹವನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದೆ.