ಕನ್ನಡದ ಕುವರ, ಮಹಾನ್ ನಟ ಪುನೀತ್ ರಾಜಕುಮಾರ್ ಅವರ ಎರಡನೇ ಪುಣ್ಯಸ್ಮರಣೆ ಕಾರ್ಯಕ್ರಮ

ದಾಂಡೇಲಿ : ನಗರದ ಶ್ರೀ ದಾಂಡೇಲಪ್ಪ ವಾಹನ ಮಾಲಕರ, ಚಾಲಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ರಸ್ತೆಯಲ್ಲಿರುವ ಸಂಘದ ನಿಲ್ದಾಣದ ಮುಂಭಾಗದಲ್ಲಿ ಕನ್ನಡದ ಕುವರ, ಮಹಾನ್ ನಟ ಪುನೀತ್ ರಾಜಕುಮಾರ್ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಪುಷ್ಪ ಗೌರವವನ್ನು ಸಲ್ಲಿಸಲಾಯಿತು ಆನಂತರ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಕ್ಷೀರಭಿಷೇಕವನ್ನು ಮಾಡಲಾಯಿತು.

ಶ್ರೀ ದಾಂಡೇಲಪ್ಪ ವಾಹನ ಚಾಲಕರ, ಮಾಲಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಅಶೋಕ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಸಂಘದ ಸದಸ್ಯರು ಹಾಗೂ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.