ಹೊನ್ನಾವರದ ಶಾರದಾಂಬಾ ದೇವಸ್ಥಾನದಲ್ಲಿ ಚಾರೋಡಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ


ಹೊನ್ನಾವರದ ರಥ ಬೀದಿಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಚಾರೋಡಿ ಮೇಸ್ತ ಸಮಾಜದ ವತಿಯಿಂದ 2022-23ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು..

ಚಾರೋಡಿ ಮೇಸ್ತ ಸಮಾಜದ ಪಿಯುಸಿ ಮತ್ತು ಎಸ್ಸೆಸೆಲ್ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಪುರಸ್ಕರಿಸಲಾಯ್ತು. ಇದೇ ವೇಳೆ ಸಾಮೂಹಿಕ ಅಕ್ಷರ ಅಭ್ಯಾಸ ಕಾರ್ಯಕ್ರಮವನ್ನು ಸಹ ನಡೆಸಲಾಯ್ತು. ವಿವಿಧ ಸಮಾಜದ 15 ಮಕ್ಕಳಿಗೆ ಅವರ ಪಾಲಕರು ಅಕ್ಷರಾಭ್ಯಾಸ ಮಾಡಿಸಿದ್ರು..

ದೇವಸ್ಥಾನದ ಟ್ರಷ್ಟಿಗಳು, ಮುಖಂಡರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ರು. ಅಖಿಲ ಕರ್ನಾಟಕ ಚಾರೋಡಿ ಮೇಸ್ತ ಸಮಾಜದಿಂದ ನಡೆಸಲಾಗಿದ್ದ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಈ ವೇಳೆ ಪ್ರಶಸ್ತಿ ಪತ್ರ ವಿತರಿಸಲಾಯ್ತು..