ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಹುಲ್ಕುತ್ರಿಯ ರಂಜನಾ ಟೀಚರ್

ತುಮಕೂರಿನ ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2023ನೇ ವರ್ಷದ ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಿದ್ದಾಪುರ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲ್ಕುತ್ರಿಯಲ್ಲಿ ಸೇವೆ ಸಲ್ಲಿಸುತ್ತಿರುವ ರಂಜನಾ ಕೃಷ್ಣ ಭಂಡಾರಿಯವರು 200 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ 100 ಮೀ. ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಹುಲ್ಕುತ್ರಿ ಶಾಲೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿರುತ್ತಾರೆ.

ಈ ಹಿಂದೆಯೂ ರಾಜ್ಯ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ರಂಜನಾ ಅವರು ಭಾಗವಹಿಸಿ ಕ್ರೀಡಾ ಸಾಧನೆ ಮಾಡಿರುತ್ತಾರೆ. ಅವರ ಈ ಸಾಧನೆಗೆ ಶಾಲೆಯ ಶಿಕ್ಷಕವೃಂದ, ಎಸ್.ಡಿ.ಎಮ್.ಸಿ. ಸಮಿತಿ, ಪಾಲಕ-ಪೋಷಕರು ಹಾಗೂ ಹಾವಿನಬೀಳು ಗ್ರಾಮಸ್ಥರು ಅಭಿನಂದಿಸಿದ್ದಾರೆ