ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಉದ್ಘಾಟನೆ ನ.೩ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ

ಸಿದ್ದಾಪುರ : ತಾಲೂಕಿನ ಕ್ಯಾದಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಸೂಪರ್ ಮಾರ್ಕೆಟ್ ಉದ್ಘಾಟನೆ ನ.೩ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ಹೇಳಿದರು.
ಅವರು ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು ಸಂಘದ ನೂತನ ಕಟ್ಟಡವನ್ನು ಅಂದಾಜು ಒಂದು ಕೋಟಿ ರೂಗಳಲ್ಲಿ ಕಟ್ಟಲಾಗಿದೆ. ಇದು ಸಂಘದ ಸ್ವಂತ ಬಂಡವಾಳವಾಗಿದೆ. ಸಂಘದ ಸದಸ್ಯರಿಗೆ ಹಾಗೂ ಸುತ್ತಮುತ್ತಲಿನ ಜನತೆಗೆ ಸಂಘದಲ್ಲಿಯೇ ಎಲ್ಲ ಸೌಲಭ್ಯಗಳು ಸಿಗಬೇಕು ಎನ್ನುವ ಉದ್ದೇಶದಿಂದ ರೈತರಿಗೆ ಬೇಕಾಗುವ ಎಲ್ಲ ಅವಶ್ಯಕ ವಸ್ತುಗಳನ್ನು ಇಡಲಾಗಿದೆ.
ಸಂಘದ ಮಹಾದ್ವಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಸೂಪರ್ ಮಾರ್ಕೆಟ್‌ನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ,ಸಭಾಭವನವನ್ನು ಶಾಸಕ ಭೀಮಣ್ಣ ನಾಯ್ಕ, ದಾಸ್ತಾನು ಕೊಠಡಿಯನ್ನು ಶಾಸಕ ಶಿವರಾಮ ಹೆಬ್ಬಾರ ಹಾಗೂ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಹಾದ್ರಿಮನೆ ವಹಿಸುವರು.
ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ರಾಘವೇಂದ್ರ ಪಿ.ಶಾಸ್ತಿç, ಜಿಲ್ಲಾ ಸಹಕಾರ ಸಂಘಗಗಳ ಉಪನಿಬಂಧಕ ಮಂಜುನಾಥ ಸಿಂಗ್, ಕ್ಯಾದಗಿ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ಜಿ.ನಾಯ್ಕ, ಸೋವಿನಕೊಪ್ಪ ಗ್ರಾಪಂ ಅಧ್ಯಕ್ಷೆ ಸುಮಾ ಮಹೇಶ ಹೆಗಡೆ ಮತ್ತಿತರರು ಉಪಸ್ಥಿತರಿರುತ್ತಾರೆ.