ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ – ಸಿದ್ದಾಪುರದ ಭುವನಗಿರಿಯಲ್ಲಿ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಭೀಮಣ್ಣ ನಾಯ್ಕ

ಸಿದ್ದಾಪುರ : 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕ್ಕೆ ಸ್ಥಳೀಯ ಶಾಸಕ ಭೀಮಣ್ಣ ನಾಯ್ಕ್ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಕನ್ನಡ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು. ಜ್ಯೋತಿಯನ್ನ ಭುವನಗಿರಿಯಿಂದ ನೆಹರೂ ಮೈದಾನ ಕ್ಕೆ ಅದ್ದೂರಿ ಮೆರವಣಿಗೆ ಮೂಲಕ ತರಲಾಯಿತು, ಹೊಸೂರ್ ನಲ್ಲಿ ವಿದ್ಯಾರ್ಥಿಗಳು ಡೊಳ್ಳಿನ ಕುಣಿತದೊಂದಿಗೆ ಸ್ವಾಗತಿಸಿದರು, ನಂತರ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಯಿತು. ನೆಹರೂ ಮೈದಾನದಲ್ಲಿ ಶಾಸಕ ಭೀಮಣ್ಣ ನಾಯ್ಕ್ ಸಾರ್ವಜನಿಕ ಉದ್ದೇಶಿಸಿ ಮಾತನಾಡಿ ರಾಜ್ಯೋತ್ಸವದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ರಾಜಕೀಯ ಪ್ರಮುಖರು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಕನ್ನಡಾಭಿಮಾನಿಗಳು ಹಾಜರಿದ್ದರು.