ಮಂಕಿ ಪಟ್ಟಣ ಪಂಚಾಯತ ಎದುರುಗಡೆ ನೂತನವಾಗಿ ಆರಂಭಗೊಂಡ ಕರ್ನಾಟಕ ಒನ್ ಸೇವಾ ಕೇಂದ್ರ

ಹೊನ್ನಾವರ :ತಾಲೂಕಿನ ಮಂಕಿ ಪಟ್ಟಣ ಪಂಚಾಯತ ಎದುರುಗಡೆ ನೂತನವಾಗಿ ಆರಂಭಗೊಂಡ ಕರ್ನಾಟಕ ಒನ್ ಸೇವಾ ಕೇಂದ್ರವನ್ನು ತಹಶೀಲ್ದಾರ ರವಿರಾಜ ದೀಕ್ಷಿತ್ ಉದ್ಘಾಟಿಸಿದರು.

ನಂತರ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಎಚ್ ಅಕ್ಷತಾ , ಉಪತಹಸಿಲ್ದಾರರು, ಕಂದಾಯ ನೀರಿಕ್ಷಕರು, ಗ್ರಾಮ ಲೇಕ್ಕಾಧಿಕಾರಿ, ಪಟ್ಟಣ ಪಂಚಾಯತ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು, ಸೇವಾ ಕೆಂದ್ರದ ಮುಖ್ಯಸ್ಥರಾದ ಉಷಾ ಕೃಷ್ಣ ನಾಯ್ಕ ಉಪಸ್ಥಿತರಿದ್ದರು.