ಮನೆ ಕುಸಿತದಿಂದ ಮೃತಪಟ್ಟವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ ಹೆಬ್ಬಾರ್

ಭಟ್ಕಳ: ಮುಟ್ಟಳ್ಳಿ ಗ್ರಾಮದಲ್ಲಿ ಇಂದು ನಡೆದಿದ್ದ ಅವಘಡಕ್ಕೆ ಸಂಬಂಧಿಸಿದಂತೆ ಭಟ್ಕಳಕ್ಕೆ ಭೇಟಿ ನೀಡಿದ ಸಚಿವ ಶಿವರಾಮ ಹೆಬ್ಬಾರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಶಾಸಕ ಸುನೀಲ್ ನಾಯ್ಕ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಗೋವಿಂದ ನಾಯ್ಕ ಸಾಥ್ ಸಚಿವರಿಗೆ ಸಾಥ್ ನೀಡಿದರು.

ಮುಟ್ಟಳ್ಳಿಯಲ್ಲಿ ಮನೆ ಮೇಲೆ ಧರೆ ಕುಸಿದು ಒಂದೇ ಕುಟುಂಬದ ಮೂವರು, ಹಾಗೂ ಓರ್ವ ಸಂಬಂಧಿ ದಾರುಣವಾಗಿ ಸಾವನ್ನಪ್ಪಿದ್ದರು.