ಸರಕಾರಿ ಪ್ರೌಢಶಾಲೆ ತೆಂಗಿನಗುಂಡಿಯ ಮೂವರುವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಭಟ್ಕಳ: ಕುಮಟಾ ತಾಲೂಕಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ತೆಂಗಿನಗುಂಡಿ
ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಮಾಧುರಿ ಕೃಷ್ಣ ಗೊಂಡ ಚಕ್ರ ಎಸೆತ ಪ್ರಥಮ, ಗುಂಡು ಎಸೆತ ದ್ವಿತೀಯ, ಮೋನಿಕಾ ಮೋಹನ ದೇವಾಡಿಗ 400 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಧನ್ಯ ದುರ್ಗಯ್ಯ ಗೊಂಡ ಉದ್ದ ಜಿಗಿತ ಪ್ರಥಮ, ಹರ್ಡಲ್ಸ ತೃತೀಯ
ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮೂವರು ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಉಷಾ ಜಿ ಭಟ್, ದೈಹಿಕ ಶಿಕ್ಷಣ ಶಿಕ್ಷಕರಾದ ಗಿರೀಶ್ ವಿ ನಾಯಕ ಮತ್ತು ಎಲ್ಲಾ ಶಿಕ್ಷಕ ವೃಂದ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೋಹನ ದೇವಾಡಿಗ, ಎಸ್ ಡಿ ಎಂ ಸಿ
ಸದಸ್ಯರು ಊರ ನಾಗರಿಕರು ಪಾಲಕರು ಹಳೆಯ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ