ಕುಮಟಾದಲ್ಲಿ ಅರಸು ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವ ಮಂಕಾಳ್‌ ವೈದ್ಯ

ಕುಮಟಾದಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಕಾಮಗಾರಿಗೆ ಸಚಿವ ಮಂಕಾಳ್‌ ವೈದ್ಯ ಭೂಮಿ ಪೂಜೆ ನೆರವೇರಿಸಿದ್ರು..ಕುಮಟಾದ ಕೊಪ್ಪಳಕರವಾಡಿಯಲ್ಲಿ ನಿರ್ಮಾಣವಾಗಲಿರುವ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಂಕಾಳ್ ವೈದ್ಯ ಭೂಮಿಪೂಜೆ ನೆರವೇರಿಸಿದರು…‌
ಈ ವೇಳೆ ಕುಮಟಾ ಪುರಸಭೆಯ ಸ್ಥಾಯಿಸಮಿತಿ ಅಧ್ಯಕ್ಷ ಕಿರಣ ಅಂಬಿಗ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಈಶ್ವರ್ ಕಾಂದೂ, ತಾ. ಪಂ. ಕಾರ್ಯನಿರ್ವಹಣಾಧಿಕಾರಿ ನಾಗರತ್ನ ನಾಯಕ, ಪುರಸಭಾ ಸದಸ್ಯರಾದ ತುಳಸಿ ಗೌಡ, ಮೋಹಿನಿ ಗೌಡ, ಗೀತಾ ಮುಕ್ರಿ, ಪಲ್ಲವಿ ಮಡಿವಾಳ, ಶೈಲಾ ಗೌಡ, ಅನಿಲ್ ಹರ್ಮಲಕರ್, ಗ್ರಾ. ಪಂ. ಅಧ್ಯಕ್ಷರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ರು…