ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆ ವಾರ ಕಾರ್ಯಕ್ರಮಕ್ಕೆ ಚಾಲನೆ

ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ, ಭಟ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಆರ್.ಎನ್. ಎಸ್‌. ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ನವಜಾತ ಶಿಶು ಆರೈಕೆ ವಾರ ಕಾರ್ಯಕ್ರಮವನ್ನು ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಹರ್ಷ ಅವರು ಉದ್ಘಾಟಿಸಿದ್ರು…

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಹರ್ಷ ಅವರು, ಮಗು ಜನ್ಮ ತಳೆದ ಒಂದು ತಿಂಗಳ ಒಳಗೆ ಸಾವನ್ನಪ್ಪುವುದನ್ನು ತಪ್ಪಿಸಲು ಶಿಶು ಆರೈಕೆ ಅತ್ಯಗತ್ಯವಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಪದ್ಮಶ್ರೀ ಸುಕ್ರಿ ಗೌಡ ಉಪಸ್ಥಿತಿ ವೇದಿಕೆಯ ಅಂದವನ್ನು ಹೆಚ್ಚಿಸಿದೆ ಎಂದು ವಿವರಿಸಿದರು.

ಭಟ್ಕಳ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್‌ ಮಾತನಾಡಿ, ನಿಂತ ನೀರಿಗಿಂತ ಹರಿಯುವ ನೀರಿಗೆ ಹೆಚ್ಚಿನ ಬೆಲೆ ಇದೆ. ಆಸ್ಪತ್ರೆಯನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೊಸ ಚಿಂತನೆಯನ್ನು ಅನುಷ್ಠಾನಗೊಳಿಸಬೇಕಾಗಿದ್ದು, ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದ್ರು…

ಮುಖ್ಯ ಅಥಿತಿಯಾಗಿ ಆಗಮಿಸಿದ ಪದಶ್ರೀ ಸುಕ್ರಿ ಬೊಮ್ಮನಗೌಡ ಅವರು ಮಾತನಾಡಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಒಳ್ಳೆಯ ಹೆಸರಿದೆ. ಆಸ್ಪತ್ರೆಯಲ್ಲಿ ಜನರಿಗೆ ಮತ್ತಷ್ಟು ಗುಣಮಟ್ಟದ ವೈದ್ಯಕೀಯ ಸೇವೆ ಮುಂದುವರಿಯಲಿ ಎಂದು ಹಾರೈಸಿದ್ರು…

ಮಕ್ಕಳ ತಜ್ಞ ಸುರಕ್ಷಿತ ಶೆಟ್ಟಿ ಮಾತನಾಡಿ, ಪ್ರಸಕ್ತವಾಗಿ ನವಜಾತ ಶಿಶು ಮರಣದ ಪ್ರಮಾಣ 21% ನಷ್ಟಿದೆ. ಇದನ್ನು ಇನ್ನಷ್ಟು ಕಡಿತಗೊಳಿಸಲು ಶಿಶು ಆರೈಕೆಗೆ ಒತ್ತು ನೀಡಬೇಕು. ಈ ಬಗ್ಗೆ ಎಲ್ಲರೂ ಮಾಹಿತಿಯನ್ನು ಹೊಂದಬೇಕಾಗಿದೆ ಎಂದು ಹೇಳಿದ್ರು…

ಆರ್.ಎನ್‌.ಎಸ್. ಕಾಲೇಜ್ ಆಫ್ ನರ್ಸಿಂಗ್ ಮುರುಡೇಶ್ವರ ಇದರ ಪ್ರಾಚಾರ್ಯ ಪ್ರೋ.ಕೇಶವಮೂರ್ತಿ ಸಿ.ಡಿ., ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ಸಹನ್‌ ಕುಮಾರ್, ರಮ್ಯಾ ಚಾರ್ಜ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮಂಜುಳಾ ಸ್ವಾಗತಿಸಿದರು. ರಾಜಶ್ರೀ ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಪೂರ್ವದಲ್ಲಿ ಆರೆನ್ನೆಸ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮತ್ತು ಸ್ವಾಗತ ನೃತ್ಯ ಮಾಡಿ ಎಲ್ಲರ ಗಮನ ಸೆಳೆದ್ರು…

ಉದಯ ನಾಯ್ಕ, ನುಡಿ ಸಿರಿ ನ್ಯೂಸ್‌, ಭಟ್ಕಳ