ಊರಿಗೆ ಸರಿಯಾಗಿ ಬಸ್ ಬಿಡುತ್ತಿಲ್ಲ ಎಂದು ಗ್ರಾಮಸ್ಥರ ಆಕ್ರೋಶ: ರಸ್ತೆ ತಡೆದು ಪ್ರತಿಭಟನೆ.!

ಮುಂಡಗೋಡ: ಉಗ್ಗಿನಕೇರಿ ಬಡ್ಡಿಗೇರಿ ಭಾಗಕ್ಕೆ ಸರಿಯಾಗಿ ಬಸ್ ಬಿಡುತ್ತಿಲ್ಲ ಎಂದು ಆರೋಪಿಸಿ, ಆಕ್ರೋಶಗೊಂಡ ಗ್ರಾಮಸ್ಥರು ಬಡ್ಡಿಗೇರಿ ಕ್ರಾಸ್ ನಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಬುಧವಾರ ಬೆಳಿಗ್ಗೆ ಪ್ರತಿಭಟನೆ ನಡೆದಿದ್ದು, ಮುಂಡಗೋಡ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಖಾಸಗಿ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರೂ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.