ಕುಮಟಾದಲ್ಲಿ ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ತಾಲೂಕಾ ಮಟ್ಟದ ಟಾಸ್ಕ್‌ ಪೋರ್ಸ್‌ ಸಭೆ


ಕುಮಟಾದ ಆಡಳಿತಸೌಧದಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದ ತಾಲೂಕಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯು ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ನಡೆಯಿತು.

ಮಳೆಯ ಅಭಾವದ ಪರಿಣಾಮ ತಾಲೂಕಿನ ರೈತರಿಗೆ ಉಂಟಾದ ನಷ್ಟದಬಗ್ಗೆ ಸಂಪೂರ್ಣ ವರದಿ ಸಂಗ್ರಹಿಸಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲು ವ್ಯವಸ್ಥೆ ಕಲ್ಪಿಸಲು ಕಾರ್ಯಪ್ರವೃತ್ತರಾಗುವಂತೆ ಟಾಸ್ಕ್ ಫೋರ್ಸ್ ತಂಡದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ರು..

ಈ ವೇಳೆ ಗ್ರೇಡ್ 2 ತಹಶೀಲ್ದಾರ್ ಸತೀಶ್ ಗೌಡ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ನಾಯ್ಕ, ಪಿ. ಆರ್. ಇ. ಡಿ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಘವೇಂದ್ರ ನಾಯ್ಕ, ಸಹಾಯಕ ಕೃಷಿ ಅಧಿಕಾರಿ ಚಂದ್ರಕಲಾ ಎಸ್. ಬರ್ಗಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.