ಕೆಲವೇ ಕ್ಷಣಗಳಲ್ಲಿ ಸಿದ್ದರಾಮೋತ್ಸವಕ್ಕೆ ರಾಹುಲ್

ದಾವಣಗೆರೆ: ಸಿದ್ದರಾಮಯ್ಯ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮ ದಾವಣಗೆರೆಯಲ್ಲಿ ಅದ್ಧೂರಿಯಿಂದ ಆರಂಭಗೊಂಡಿದೆ. ಪ್ರಾರಂಭದಲ್ಲಿ ಸಿದ್ದರಾಮಯ್ಯ ಕುರಿತ ಪುಸ್ತಕವನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆಗೊಳಿಸಿದರು. ಆರ್.ವಿ. ದೇಶಮಾಂಡೆ, ರಮೇಶ್ ಕುಮಾರ್, ಜಿ. ಪರಮೇಶ್ವರ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಇನ್ನೂ ಸಿದ್ದರಾಮಯ್ಯ ವೇದಿಕೆ ಬಳಿ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಅವರನ್ನು ಸುತ್ತುವರಿದು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ ಸಂಭ್ರಮದಿಂದ ಸ್ವಾಗತಿಸಿದರು. ರಾಜ್ಯದ ವಿವಿಧ ಭಾಗದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.