ಖರ್ವಾದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ – 70 ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ




ಹೊನ್ನಾವರ ತಾಲೂಕಿನ ಖರ್ವಾದ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಬೆಂಗಳೂರು ವತಿಯಿಂದ 2021-22ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆಗಾಗಿ ಪ್ರಶಸ್ತಿ ಲಭಿಸಿದೆ.

ಅಪೆಕ್ಸ್ ಬ್ಯಾಂಕಿನ ಬಹುಮಾನ ಯೋಜನೆಯಡಿಯಲ್ಲಿ ಹತ್ತು ಸಾವಿರ ರೂಪಾಯಿ ಬಹುಮಾನವಾಗಿ ಈ ಪ್ರಶಸ್ತಿ ಲಭಿಸಿದೆ.ಶಿರಸಿಯ ‘ದಿ ತೋಟಗಾರ್ಸ್ ಕೋ-ಆಪರೆಟಿವ್ ಸೇಲ್ ಸೊಸೈಟಿ ಆವರಣದಲ್ಲಿ ನಡೆದ 70ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರು, ಶಾಸಕರು,ಮಾಜಿ ಸಚಿವರಾದ ಶಿವರಾಮ ಹೆಬ್ಬಾರ್ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾದ ಈಶ್ವರ ಗೌಡರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿದ್ರು..


ಈ ಹಿಂದೆ ಉತ್ತಮ ಕಾರ್ಯನಿರ್ವಹಣೆ ಜೊತೆಗೆ ಶೇಕಡಾ ನೂರರ ಸಾಧನೆಗಾಗಿ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಮೋಹನ್ ನಾಯ್ಕ ಅವರಿಗೆ ಸತತ ನಾಲ್ಕು ಬಾರಿ ಕೆಡಿಸಿಸಿಯಿಂದ ಉತ್ತಮ ಕಾರ್ಯನಿರ್ವಾಹಕ ಪ್ರಶಸ್ತಿ ಲಭಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಈ ವೇಳೆ ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷ ಮಾದೇವ ಹಳ್ಳೇರ,ನಿರ್ದೇಶಕರಾದ ವಿಶ್ವನಾಥ ಭಟ್ಟ, ಗಜಾನನ ನಾಯ್ಕ, ವೀಣಾ ನಾಯ್ಕ,ಗೌರಿ ಗೌಡ ,ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಮೋಹನ್ ನಾಯ್ಕ ಹಾಗೂ ಸಿಬ್ಬಂದಿ ಗಣಪತಿ ಹೆಗಡೆ ಉಪಸ್ಥಿತರಿದ್ದರು.
.