ಹಮಾಲಿ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿದ ಹೋದ ವ್ಯಕ್ತಿಯೋರ್ವ ನಾಪತ್ತೆ

ಭಟ್ಕಳ: ಹಮಾಲಿ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿದ ಹೋದ ವ್ಯಕ್ತಿಯೋರ್ವ ನಾಪತ್ತೆಯಾಗಿರುವ ಘಟನೆ ಕೆರೆಗದ್ದೆ ತೇರ್ನಮಕ್ಕಿಯಲ್ಲಿ ನಡೆದಿದ್ದು ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾಗಿರುವ ವ್ಯಕ್ತಿಯನ್ನು ಅನಂತ ತಿಮ್ಮಯ್ಯಾ ನಾಯ್ಕ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ, ಉಡುಪಿ, ಕುಂದಾಪೂರ ಕಡೆಗಳಿಗೆ ಹಮಾಲಿ ಕೆಲಸಕ್ಕೆ ಹೋಗುತ್ತಿದ್ದವನು ಸಪ್ಟೆಂಬರ್ 18 ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಹಮಾಲಿ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವನು ಮರಳಿ ಮನೆಗೆ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಎಲ್ಲಯೋ ಹೋಗಿ ಕಾಣಿಯಾಗಿದ್ದಾನೆ.

ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ನಾಪತ್ತೆಯಾದವನ ಪತ್ನಿ ದೂರು ದಾಖಲಿಸಿದ್ದಾರೆ