ತಮ್ಮ ಊರಿನ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು: ವಿವೇಕ ಹೆಬ್ಬಾರ

ಯಲ್ಲಾಪುರ: ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶ, ರಾಜ್ಯ ಹಾಗೂ ಊರಿನ ಬಗೆಗೆ ಅಭಿಮಾನ ಹಾಗೂ ಕಳಕಳಿ ಹೊಂದಿರಬೇಕು ಎಂದು ವಿವೇಕ ಹೆಬ್ಬಾರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಂಪ್ ಸಮೂಹ ಸಂಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿ ಅವರು ಮಾತನಾಡಿದರು. ನಮ್ಮ ಕುಟುಂಬ ಹಾಗೂ ಸಂಸ್ಥೆ ಅನೇಕ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಬೆಂಬಲವಾಗಿ ನಿಂತಿದೆ. ಅಂತಹ ವಿದ್ಯಾರ್ಥಿಗಳು ಸಾಧನೆ ಮಾಡಿದಾಗ ಸಂತೃಪ್ತಿ ಭಾವ ನಮ್ಮದಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟಣಕರ್, ಸದಸ್ಯರಾದ ರವಿ ಪಾಟಣಕರ್, ಜ್ಯೋತಿ ನಾಯ್ಡು ಇತರರು ಉಪಸ್ಥಿತರಿದ್ದರು.