ಜಿಲ್ಲೆಗೆ ಆಗಮಿಸುತ್ತಿರುವ ಸಿಎಂ ಬೊಮ್ಮಾಯಿ ಅವರಿಗೆ ಗೋವಾದಲ್ಲಿ ಸ್ವಾಗತ ಕೋರಿದ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್‌.ಅಶೋಕ ಅವರಿಗೆ ಶಾಸಕರಾದ ರೂಪಾಲಿ ನಾಯ್ಕ ಗೋವಾದಲ್ಲಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ್ ಗುನಗಿ, ಕಾರವಾರ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳು, ಉಪವಿಭಾಗ ಅಧಿಕಾರಿಗಳು ಉಪಸ್ಥಿತರಿದ್ದರು.