ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಾಯ

ಬೆಂಗಳೂರು ನ.22: ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಾಯಗೊಂಡಿರವ ಘಟನೆ ನಗರದ ವೀವರ್ಸ್ ಕಾಲೋನಿ ಸಮೀಪದ ಮಾರುತಿ ಬಡಾವಣೆಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕುಟುಂಬ ವಾಸವಾಗಿತ್ತು. ಆಡುಗೆ ಅನಿಲ ಸೋರಿಕೆಯಾಗಿರುವುದು ತಿಳಿಯದೆ ಇಂದು (ನ.22) ಮುಂಜಾನೆ 5:30 ರ ಸುಮಾರಿಗೆ ಲೈಟ್​ನ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್​ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಡಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.