ಭಟ್ಕಳದ ಮುಟ್ಠಳ್ಳಿಗೆ ಆಗಮಿಸಿದ ಸಿ.ಎಂ: ಮೃತ ವ್ಯಕ್ತಿಯ ಕುಟುಂಬಕ್ಕೆ ತಲಾ ಐದು ಲಕ್ಷ ಘೋಷಣೆ

ಭಟ್ಕಳ: ಭಟ್ಕಳದ ಮುಟ್ಠಳ್ಳಿಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಸಿ.ಎಂ ಬೊಮ್ಮಾಯಿ ಜೊತೆ ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಿವರಾಮ್ ಹೆಬ್ಬಾರ್, ಭಟ್ಕಳ ಶಾಸಕ ಸುನಿಲ್ ನಾಯ್ಕ ಸಾಥ್ ನೀಡಿದರು. ಮುಟ್ಠಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತವಾದ ಸ್ಥಳ ವೀಕ್ಷಣೆ ಮಾಡಿದರು.

ನಿನ್ನೆ ದಿನ ಲಕ್ಷ್ಮಿ ನಾರಾಯಣ ನಾಯ್ಕ ರವರ ಮನೆಯಮೇಲೆ ಗುಡ್ಡ ಕುಸಿದು ಅನಂತನಾಯ್ಕ(,35), ಮಗಳು ಲಕ್ಷ್ಮಿ ನಾಯ್ಕ, (40) ಮೊಮ್ಮಗ ಪ್ರವೀಣ್ (16) ಒಟ್ಟು ನಾಲ್ಕು ಜನ ಭೂಸಮಾದಿಯಾಗಿದ್ದರು. ಮೃತ ವ್ಯಕ್ತಿಯ ಕುಟುಂಬಕ್ಕೆ ತಲಾ ಐದು ಲಕ್ಷದ ಮಂಜೂರಾತಿ ಆದೇಶ ಪ್ರತಿಯನ್ನು ಸಿ.ಎಂ. ನೀಡಿದರು

ಇನ್ನು ಪೂರ್ಣ ಹಾನಿಯಾದ ಐದು ಜನರಿಗೆ ತಲಾ ತೊಂಬತ್ತು ಸಾವಿರದ ನೂರು ಮಂಜೂರಾತಿ ಆದೇಶ ಪ್ರತಿ ಸಿ.ಎಂ ನೀಡಿದ್ದಾರೆ.